ರಾಮನಗರ: ತೋಟಕ್ಕೆ ನೀರು ಹಾಯಿಸುತ್ತಿದ್ದ ವ್ಯಕ್ತಿ ಮೇಲೆ ಕಾಡಾನೆಯೊಂದು ದಿಢೀರ್ ದಾಳಿ ನಡೆಸಿದ್ದು, ಗಾಯಾಳು ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಈ ಘಟನೆಯು ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ತಿಪ್ಪೂರು ಗ್ರಾಮದ ಬಳಿ ನಡೆದಿದ್ದು, ಮೃತನನ್ನು ಶಿವರುದ್ರ (42) ಎಂದು ಗುರುತಿಸಲಾಗಿದೆ. ಎಷ್ಟು ಹೊತ್ತಾದರೂ ಮನೆಗೆ ಬಾರದ ಹಿನ್ನೆಲೆ ಕುಟುಂಬಸ್ಥರು ತೋಟದಲ್ಲಿ ಪರಿಶೀಲನೆ ನಡೆಸಿದಾಗ ವ್ಯಕ್ತಿಯ ಮೃತದೇಹ ಸಿಕ್ಕಿದೆ.
ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅರಣ್ಯಾಧಿಕಾರಿಗಳು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಈ ಸಂಬಂಧ ಕೋಡಿಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇನ್ನು ಮೈಸೂರಿನ ವರುಕೋಡು ಮುರಾರ್ಜಿ ಶಾಲೆಯ ಬಳಿ ವಾರದ ಹಿಂದೆ ಹುಲಿಯೊಂದು ಪ್ರತ್ಯಕ್ಷವಾಗಿತ್ತು. ಇದರ ಬೆನ್ನಲ್ಲೇ ಮತ್ತೆ ಶಾಲೆಯ ಬಳಿ ಅದೇ ಹುಲಿ ಪ್ರತ್ಯಕ್ಷವಾಗಿದೆ. ಈ ಹಿನ್ನೆಲೆಯಲ್ಲಿ ಸುತ್ತಮುತ್ತಲಿನ ಗ್ರಾಮಗಳಲ್ಲಿ ಭಯದ ವಾತಾವರಣ ನಿರ್ಮಾಣವಾಗಿದ್ದು,ಹುಲಿಯನ್ನು ಹಿಡಿಯುವಂತೆ ಅರಣ್ಯ ಇಲಾಖೆ ಸಿಬ್ಬಂದಿಯನ್ನು ಆಗ್ರಹಿಸುತ್ತಿದ್ದಾರೆ.